Friday, 12 October 2012

ನಂಬಿ ಕೆಟ್ಟವರಿಲ್ಲವೊ ರಂಗಯ್ಯನ

ನಂಬಿ ಕೆಟ್ಟವರಿಲ್ಲವೊ ರಂಗಯ್ಯನ
ನಂಬದೆ ಕೆಟ್ಟರೆ ಕೆಡಲಿ
ಅಂಬುಜನಾಭನ ಅಖಿಳ ಲೋಕೇಶನ
ಅಪ್ರಮೇಯನಾದ ಆದಿಪುರುಷನ
ಪಿತನ ತೊಡೆಯ ಮೇಲೆ ಧ್ರುವರಾಯ
ಹಿತದಿಂದ ಕುಳಿತಿರಲು
ಮತಿಹೀನಳಾದ ಸುರುಚಿದೇವಿ ನೂಕಲು
ಹಿತದಿ ಧ್ರುವಗೆ ಪಟ್ಟ ಕೊಟ್ಟ ಮುರಾರಿಯ
ವರ ಪ್ರಹ್ಲಾದನ ಪಿತನು ಬಾಧಿಸುತಿರೆ
ಹರಿ ನೀನೆ ಗತಿಯೆನಲು
ಪರಮ ಪ್ರೀತಿಯಿಂದ ತರಳನ ಪಾಲಿಸಿ
ದುರುಳ ಹಿರಣ್ಯಕಶ್ಯಪನ ಸೀಳಿದ ಧೊರೆಯ
ಕರಿರಾಜನ ಸಲಹಿ ಅಂಜದಿರೆಂದು ಅ-
ದರಿಸಿದವರು ಯಾರೋ
ಗರುಡಗಮನ ಶ್ರೀ ಪುರಂದರವಿಠಲನ
ಚರಣಕಮಲವನ್ನು ದೃಢದಿಂದ ನಂಬಿರೊ

No comments:

Post a Comment