Friday, 12 October 2012

ಆದದ್ದೆಲ್ಲ ಒಳಿತೇ ಆಯಿತು

ಆದದ್ದೆಲ್ಲ ಒಳಿತೇ ಆಯಿತು ನಮ್ಮ

ಶ್ರೀಧರನ ಸೇವೆ ಮಾಡಲು ಸಾಧನ ಸಂಪತ್ತಾಯಿತು
ದಂಡಿಗೆ ಬೆತ್ತ ಹಿಡಿಯುವುದಕ್ಕೆ
ಮಂಡೆ ಬಾಗಿ ನಾಚುತಲಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ
ದಂಡಿಗೆ ಬೆತ್ತ ಹಿಡಿಸಿದಳಯ್ಯ
ಗೋಪಾಳ ಬುಟ್ಟಿ ಹಿಡಿಯುವುದಕ್ಕೆ
ಭೂಪತಿಯೆಂದು ಗರ್ವಿಸುತ್ತಿದ್ದೆ
ಆ ಪತ್ನೀಕುಲ ಸಾವಿರವಾಗಲಿ
ಗೋಪಾಳ ಬುಟ್ಟಿ ಹಿಡಿಸಿದಳಯ್ಯ
ತುಳಸೀ ಮಾಲೆ ಹಾಕುವುದಕ್ಕೆ
ಅರಸನೆಂದು ತಿರುಗುತಲಿದ್ದೆ
ಸರಸಿಜಾಕ್ಷ ಪುರಂದರವಿಠಲನು
ತುಳಸೀಮಾಲೆ ಹಾಕಿಸಿದನು

No comments:

Post a Comment